ಹಾವೇರಿ: ನಿಮ್ಮ ಆಸ್ತಿ ಉಳಿಸಿಕೊಳ್ಳಬೇಕೆಂದ್ರೆ ಬಿಜೆಪಿಗೆ ಮತ ಹಾಕಿ. ಸರ್ಕಾರಕ್ಕೆ ಹೋಗಬೇಕೆಂದರೆ ಕಾಂಗ್ರೆಸ್ಗೆ ಹಾಕಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾನಗಲ್ ವಿಧಾನಸಭಾ ಕ್ಷೇತ್ರದ ಮಾರನಬೀಡ್, ಕಂಚಿನೆಗಳೂರು, ಮಲಗುಂದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿತ್ರಾರ್ಜಿತ ಆಸ್ತಿ ಮಕ್ಕಳಿಗೆ ಬರಬೇಕಾದರೆ ಶೇ 55% ರಷ್ಟು ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಎನ್ನುತ್ತಾರೆ.
ಮೊದಲು ತೆರಿಗೆ ಕಟ್ಡುವ ವ್ಯವಸ್ಥೆ ಇತ್ತು. ಆಗಿನ ಪ್ರಧಾನಿ ರಾಜಿವ್ ಗಾಂಧಿ ಅವರು ತಮ್ಮ ತಾಯಿಯ ಆಸ್ತಿ ಪಡೆಯಲು ಸರ್ಕಾರಕ್ಕೆ ತೆರಿಗೆ ಕಟ್ಟಬೇಕು ಅನ್ನುವ ಕಾರಣಕ್ಕೆ ಆ ಕಾಯ್ದೆಯನ್ನು ರದ್ದು ಮಾಡಿದರು. ಈಗ ರಾಹುಲ್ ಗಾಂಧಿ ಅದನ್ನು ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇವಲ ಸಮೀಕ್ಷೆ ಮಾಡಯತ್ತೇವೆ ಅಂತ ಹೇಳುತ್ತಿದ್ದಾರೆ. ಅವರ ನಿಲುವು ಏನು ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ಚುನಾವಣಾ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದು ಇಟ್ಟುಕೊಂಡಿದ್ದಾರೆ. ರಾಜ್ಯ ಸರ್ಕಾರ ಬಳಿ ಇರುವ ವರದಿಯನ್ನೇ ಬಿಡುಗಡೆ ಮಾಡಿಸಲಾಗದ ರಾಹುಲ್ ಗಾಂಧಿ, ದೇಶಾದ್ಯಂತ ಹಿಂದುಳಿದ ವರ್ಗಗಳ ಸಮೀಕ್ಷೆ ಮಾಡುವುದಾಗಿ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.a