ರಾಮನಗರ:- ಮತದಾರರನ್ನ ಯಾವುದೇ ರೀತಿಯ ಅಡ್ಡ ದಾರಿಗೆ ಎಳೆಯಬಾರದು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕುಟುಂಬ ರಾಜಕಾರಣ ಅನ್ನೋದು ರಾಜ್ಯ, ದೇಶದಲ್ಲಿ ಅಪ್ರಸ್ತುತ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ತೆಗೆದು ನೋಡಿದ್ರೆ ಗೊತ್ತಾಗುತ್ತೆ. ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲರೂ ಇದ್ದಾರೆ. ಅವರ ಟೀಕೆಗಳ ಬಗ್ಗೆ ಚರ್ಚೆ ಈಗ ಅಪ್ರಸ್ತುತ ಎಂದು ತಿರುಗೇಟು ನೀಡಿದ್ದಾರೆ.
ಕಳೆದ 10 ದಿನಗಳಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸರಣಿ ಸಭೆಗಳನ್ನ ಮಾಡ್ತಿದ್ದಾರೆ. ನಿನ್ನೆ ಬೆಂಗಳೂರು ದಕ್ಷಿಣ, ಆರ್.ಆರ್ ನಗರ, ಕುಣಿಗಲ್ಗೆ ಹೋಗಿದ್ದೆ. ಬಹುಮುಖ್ಯವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಎರಡೂ ಹೃದಯ ಒಟ್ಟಾಗಿದೆ. ಇದನ್ನೆಲ್ಲ ನೋಡ್ತಿದ್ರೆ ನಮ್ಮ ಗೆಲುವು 100% ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದು ಧರ್ಮ ಮತ್ತು ಅಧರ್ಮ ನಡುವೆ ಈ ಚುನಾವಣೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ವ್ಯಾಖ್ಯಾನ ಮಾಡೋದಕ್ಕೆ ಹೋಗೋದಿಲ್ಲ. ಪ್ರತಿಯೊಂದು ಚುನಾವಣೆ ಆರೋಗ್ಯಕರವಾಗಿ ನಡೆಯಬೇಕು. ಮತದಾರರನ್ನ ಯಾವುದೇ ರೀತಿಯ ಅಡ್ಡ ದಾರಿಗೆ ಎಳೆಯಬಾರದು ಅಷ್ಟೇ ಎಂದು ತಿಳಿಸಿದ್ದಾರೆ