ಬೆಂಗಳೂರು/ನವದೆಹಲಿ:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಅಸಡ್ಡೆಯನ್ನು ತೋರಿಸುತ್ತಿದ್ದಾರೆ: ಬಿ. ವೈ. ವಿಜಯೇಂದ್ರ
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
ಕರ್ನಾಟಕದ ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ ಚಿಕ್ಕಮಗಳೂರುಗಳಲ್ಲಿ ಮತದಾನ ಆರಂಭವಾಗಿದೆ.
ಉಳಿದಂತೆ ಅಸ್ಸಾಂನ 5, ಬಿಹಾರದ 5, ಛತ್ತೀಸ್ಗಢದ 3, ಕರ್ನಾಟಕದ 14, ಕೇರಳದ 20, ಮಧ್ಯಪ್ರದೇಶದ 7, ಮಹಾರಾಷ್ಟ್ರದ 8, ಮಣಿಪುರದ 1, ರಾಜಸ್ಥಾನದ 13, ತ್ರಿಪುರಾದ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.