ಬೆಂಗಳೂರು:- ರೈತರಿಗೆ ವಕ್ಫ್ ನೋಟಿಸ್ ವಿಚಾರವನ್ನು ಮೈತ್ರಿ ನಾಯಕರು ರಾಜಕೀಯ ಬೇಳೆಗೆ ಬೇಯಿಸಿಕೊಳ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಹೇಳಿದ್ದಾರೆ.
ಬಡ ರೈತರ ಜಮೀನು ಕಬಳಿಸಲು ಕಾಂಗ್ರೆಸ್ ನಿಂದ ಬಗೆ-ಬಗೆಯ ಪ್ರಯತ್ನ: ಆರ್ ಅಶೋಕ್!
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ-ಜೆಡಿಎಸ್ಗೆ ಉಪಚುನಾವಣೆಯಲ್ಲಿ ಸೋಲುವ ಭೀತಿಯಿದೆ ಅದಕ್ಕಾಗಿ ವಕ್ಫ್ ಬೋರ್ಡ್ ರೈತರ ಜಮೀನು ಕಬಳಿಕೆ ಮಾಡಲು ಮುಂದಾಗಿದೆ ಎಂದು ಸುಳ್ಳು ಹೇಳ್ತಿದ್ದಾರೆ ಎಂದರು.
ವಿಜಯಪುರ ರೈತರಿಗೆ ವಕ್ಫ್ ಬೋರ್ಡ್ನಿಂದ ನೋಟಿಸ್ ನೀಡಿರುವ ಬಿಜೆಪಿ-ಜೆಡಿಎಸ್ ವಿರುದ್ಧ ಮಾತನಾಡಿ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಬಿಜೆಪಿ-ಜೆಡಿಎಸ್ ನಾಯಕರು ಕೊಡುತ್ತಿದ್ದಾರೆ. ಎರಡು ಪಕ್ಷಗಳಿಗೆ 3 ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲುವ ಭೀತಿ ಕಾಡುತ್ತಿದೆ. ಚುನಾವಣೆ ಬಂದಾಗ ಸಮಾಜ ವಿಭಜನೆ ಮಾಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಬಿಜೆಪಿ ಮಾಡುತ್ತಿದೆ. ಚುನಾವಣೆಗಳಲ್ಲಿ ಧರ್ಮ, ಜಾತಿ ಆಧಾರದಲ್ಲಿ ಮತ ವಿಭಜನೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಸೊಲಿನ ಭೀತಿಯಲ್ಲಿ ಇಂತಹ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದೆ. ಅವರ ಜಮೀನು ಪಡೆಯಲು ಮುಂದಾಗಿದೆ ಎನ್ನುವುದು ಸುಳ್ಳು. ಬಿಜೆಪಿ-ಜೆಡಿಎಸ್ನವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಚುನಾವಣೆ ಸಮಯದಲ್ಲಿ ನೇರವಾಗಿ ಜನರ ಮುಂದೆ ಹೋಗಬೇಕು. ಸರ್ಕಾರದ ವೈಫಲ್ಯಗಳ ಬಗ್ಗೆ ಹೇಳಬೇಕು. ಅದನ್ನು ಬಿಟ್ಟು ಹೀಗೆ ಸುಳ್ಳು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.