ಬೆಂಗಳೂರು:- ಹವಮಾನ ಇಲಾಖೆಯು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
Kumaraswamy: ನನ್ನ ಹತ್ತಿರ ಇರುವ ಪೆನ್ ಡ್ರೈವ್ ಶೀಘ್ರದಲ್ಲೇ ಬಿಡ್ತೀನಿ – ಹೆಚ್ ಡಿ ಕುಮಾರಸ್ವಾಮಿ..!
ನಗರದಲ್ಲಿ ದಟ್ಟವಾಗಿ ಮೋಡ ಕವಿದ ವಾತಾವರಣವಿದೆ. ಹೀಗಾಗಿ ಗುಡುಗು ಸಹಿತ 40 ರಿಂದ 50 ಕೀ.ಮಿ ವೇಗದಲ್ಲಿ ಗಾಳಿಯೊಂದಿಗೆ ಮಳೆ ಬರಲಿದ್ದು, ಮಳೆಯಿಂದ ಜನರು ಜಾಗ್ರತೆ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಇನ್ನೂ ಮೇ. 12 ನೇ ತಾರೀಖಿನವರೆಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಮೂನ್ಸುಚನೆ ನೀಡಿದೆ.
ಮಳೆ ಸಂದರ್ಭದಲ್ಲಿ ಅವಘಡ ಸಂಭವ ಹಿನ್ನಲೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕೆಲ ಸಲಹೆಗಳನ್ನು ಕೊಟ್ಟಿದೆ.
ಮನೆಯೊಳಗೆ ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಇರಬೇಕು.
ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ.
ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.
ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ.
ಎಲೆಕ್ನಿಕಲ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್ಪ್ಲಗ್ ಮಾಡಿ.
ಮಳೆ ವೇಳೆ ತಕ್ಷಣ ಜಲಮೂಲಗಳಿಂದ ಹೊರ ಬರುವಂತೆ ಸೂಚನೆ.
ವಿದ್ಯುಚ್ಛಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ.