ಮೈಸೂರು:- ಚುನಾವಣೆ ಪ್ರಚಾರಕ್ಕೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಮೈಸೂರಿನಲ್ಲಿ ರಣಕಹಳೆ ಮೊಳಗಿಸಿದ್ದಾರೆ.
ಈ ವೇಳೆ ತುಂಬಿದ ಸಭೆಯಲ್ಲಿ ಮಾತನಾಡಿದ ಮೋದಿ, ದೇಶದ ಐಟಿ ಹಬ್ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಬೆಂಗಳೂರಿನಲ್ಲಿನ ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
ತಾಯಿ ಚಾಮುಂಡೇಶ್ವರ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ. ಹೆಚ್.ಡಿ.ದೇವೇಗೌಡರು ದೇಶದ ಅತ್ಯಂತ ಹಿರಿಯ ನಾಯಕರು. ಅವರ ಆಶೀರ್ವಾದ ಸಿಕ್ಕಿರುವುದು ಕೂಡ ಒಂದು ಸೌಭಾಗ್ಯವಾಗಿದೆ. ಮೈಸೂರು, ಇಡೀ ಕರ್ನಾಟಕದ ಆಶೀರ್ವಾದ ನಮಗೆ ಸಿಗಬೇಕು ಎಂದು ಹೇಳಿದರು.
ಈ ಲೋಕಸಭಾ ಚುನಾವಣೆ ಮುಂದಿನ 5 ವರ್ಷ ಬಹಳ ಮಹತ್ವದ್ದಾಗಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ, ಇದು ಮೋದಿ ಗ್ಯಾರಂಟಿ. ದೇವೇಗೌಡರು ಕೂಡ ಭಾಷಣದಲ್ಲಿ ಗ್ಯಾರಂಟಿ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮುಂದಿನ 5 ವರ್ಷಗಳವರೆಗೆ ಉಚಿತ ರೇಷನ್ ನೀಡುತ್ತೇವೆ. 75 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ. ಬಡವರಿಗೆ ಹೊಸ ಮನೆಗಳನ್ನು ನಿರ್ಮಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದರು.
ಇದು ಹೊಸ ಭಾರತ ಹೊಸ ಚಿತ್ರರಣವಾಗಿದೆ ಎಂದರು.
ಹಿಂದಿನ ಭಾರತ ಹಳೆಯ ಹಳ್ಳ ಬಿದ್ದ ರಸ್ತೆಗಳಿದ್ದವು. ಆದರೆ ಇಂದಿನ ಭಾರತ ಬದಲಾಗಿದೆ. ಪೂರ್ಣ ಪ್ರಮಾಣದಲ್ಲಿ ಹೈವೆ ರಸ್ತೆಗಳು ನಿರ್ಮಾಣವಾಗಿವೆ. ಭಾರತ ಪ್ರಪಂಚದ RND ಹಬ್ಬ ಮುಂದಿನ ದಿನದಲ್ಲಿ ನಿರ್ಮಾಣ ಆಗಲಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆ ಮಾಡುತ್ತೇವೆ. 10 ವರ್ಷಗಳ ಹಿಂದೆ ಭಾರತ ಬೇರೆ ದೇಶದ ಮೇಲೆ ಅವಲಂಬಿತವಾಗಿತ್ತು. ಟೆಕ್ನಾಲಜಿ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆ ಮಾಡಿದ್ದೇವೆ. ವೈಜ್ಞಾನಿಕ ಸಂಶೋಧನೆಗಳು ನಡೆಯುತ್ತೇವೆ. ಕನ್ನಡ ದೇಶದ ಸಮೃದ್ಧಿ ಭಾಷೆವಾಗಿದೆ. ಎನ್ಡಿಎ ಏನು ಹೇಳುತ್ತೋ ಅದನ್ನು ಮಾಡಿ ತೋರಿಸುತ್ತದೆ. ತ್ರಿವಳಿ ತಲಾಖ್, ಮಹಿಳೆಯರಿಗೆ ಮೀಸಲಾತಿ, ರಾಮಮಂದಿರ ನಿರ್ಮಾಣ. ಬಿಜೆಪಿಯ ಸಂಕಲ್ಪ ಅದು ಮೋದಿಯ ಗ್ಯಾರಂಟಿ ಆಗಿರುತ್ತದೆ. ನಿಮ್ಮ ಒಂದು ವೋಟ್ನಿಂದ ನನ್ನ ಶಕ್ತಿ ಬಲವರ್ಧನೆ ಮಾಡುತ್ತೆ ಎಂದರು.
ಮೈಸೂರು ರಾಜರು ಮಾಡಿದ ಅಭಿವೃದಿ ಕಾರ್ಯ ದೇಶಕ್ಕೆ ಕನ್ನಡಿಯಾಗಿದೆ. ಕಾಂಗ್ರೆಸ್ ಪಕ್ಷ ತುಕಡೆ ತುಕಡೆ ಗ್ಯಾಂಗ್ ಜೊತೆ ಇದೆ. 370 ಆರ್ಟಿಕಲ್ ವಿದಿಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಕ್ಷರು ಮಾತನಾಡಿದ್ರು. 370 ಆರ್ಟಿಕಲ್ಗೂ ಕಾಶ್ಮೀರಿಗೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ರು. ಭಾರತ ಮಾತೆ ಜೈ ಹೇಳೋಕೆ ಯಾರ ಅನುಮತಿ ಪಡೆಯ ಬೇಕು ನೀವೆ ಹೇಳಿ ಎಂದು ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್ ಕೊಟ್ಟರು.
![](https://ainlivenews.com/wp-content/uploads/2024/01/Ad-Banner-copy-scaled.jpg)