ರಾಮನಗರ: ಚನ್ನಪಟ್ಟಣದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ, ಸ್ವಾತಂತ್ರ್ಯೋತ್ಸವದ ಭಾಷಣದಲ್ಲೂ ಕುಮಾರಸ್ವಾಮಿಗೆ ಟಾಂಗ್ ನೀಡಿದರು. ಇಂದು ನನ್ನ ರಾಜಕೀಯ ಬದುಕಿನಲ್ಲಿ ಬಹಳ ಪವಿತ್ರ ದಿನ. 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದೆ. ನಿಮ್ಮೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಕೋರಲು ಬಂದಿದ್ದೇನೆ.
ಬಾಳೆ ಎಲೆಯಲ್ಲಿ ಊಟ ಮಾಡುತ್ತೀರಾ.? ಹಾಗಾದ್ರೆ ಈ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲೇಬೇಕು
ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂಬ ಹೆಸರು ಬದಲಾವಣೆ ಆಗುತ್ತಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಆಗುತ್ತಿದೆ. ಹಾಗಾಗಿ ಇಂದು ಚನ್ನಪಟ್ಟಣಕ್ಕೆ ಬಂದು ಧ್ವಜಾರೋಹಣ ಮಾಡುತ್ತಿದ್ದೇನೆ. ನಾನು ನಿಮ್ಮನ್ನು ಬಿಟ್ಟುಹೋಗುವ ಪ್ರಶ್ನೆಯೇ ಇಲ್ಲ. ಧ್ವಜವನ್ನು ಅರ್ಧಕ್ಕೆ ಹಾರಿಸಿದರೆ ಅದು ಅಗೌರವ. ಹಾಗೆಯೇ ಜನರನ್ನು ಅರ್ಧಕ್ಕೆ ಬಿಟ್ಟು ಹೋಗೋದು ಅಗೌರವ. ಈ ಜಿಲ್ಲೆಯಲ್ಲಿ ಹುಟ್ಟಿದ್ದೇವೆ. ಈ ಜನರ ಅಭಿವೃದ್ಧಿಗೆ ಕೆಲಸ ಮಾಡಬೇಕಿದೆ. ಈ ಜಿಲ್ಲೆಗೆ ಸಿಎಂ 150 ಕೋಟಿ ವಿಶೇಷ ಅನುದಾನ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.