ಬೀದರ್ (ಏ.29): ಕೇಂದ್ರ ಸಚಿವರು, ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಭಗವಂತ ಖೂಬಾರವರ ಗೆಲುವಿಗಾಗಿ ನಾವು, ಬೆಲ್ದಾಳೆಯವರು ಒಂದಾಗಿದ್ದೇವೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರ ಪರವಾಗಿ ಭಾನುವಾರ ಬೀದರ್ ದಕ್ಷಿಣ ಕ್ಷೇತ್ರದ ಚಾಂಗಲೇರಾ, ಮುತ್ತಂಗಿ, ಉಡಬಾಳ, ಮಂಗಲಗಿ, ಖೇಳಿ ರಂಜೋಳ, ಔರಾದ (ಎಸ್), ಸಿರ್ಸಿ (ಎ), ಕಾಡವಾದ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆಯವರೊಟ್ಟಿಗೆ ಜಂಟಿಯಾಗಿ ಮತಯಾಚನೆ ನಡೆಸಿ ಅವರು ಮಾತನಾಡಿದರು.
10th ಪಾಸಾದವರಿಗೆ ಗುಡ್ʼನ್ಯೂಸ್: ಭಾರತೀಯ ನೌಕಾಪಡೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ದೇಶದ ಒಳಿತಿಗಾಗಿ ಮೋದಿಯವರು, ದೇವೇಗೌಡರು ಒಂದಾಗಿದ್ದಾರೆ. ಅದರಂತೆಯೇ ಕ್ಷೇತ್ರದ ಒಳಿತಿಗಾಗಿ ನಾವು ಒಂದಾಗಿದ್ದೇವೆ. ಕರ್ನಾಟಕದ ಹೊಸಪೇಟೆಯಲ್ಲಿ ಮೋದಿಯವರು, ಕುಮಾರಸ್ವಾಮಿರವರು ಜೊತೆಯಾಗಿ ಮತಯಾಚನೆ ನಡೆಸಿದ್ದಾರೆ. ಬೀದರ್ ನಲ್ಲಿ ನಾನು, ಬೆಲ್ದಾಳೆಯವರು ಜೊತೆಯಾಗಿ ಮತಯಾಚನೆ ಮಾಡುತ್ತಿದ್ದೇವೆ ಎಂದರು.
ಇವತ್ತು ದೇಶ ಯಾರು ಮುನ್ನಡೆಸಬೇಕು ಎಂಬುದು ಮುಖ್ಯವಾಗಿದೆ. ದೇವೇಗೌಡರಂತಹ ಮುತ್ಸದ್ದಿ ರಾಜಕಾರಣಿ ಮೋದಿಯವರ ಆಡಳಿತವನ್ನು ಮೆಚ್ಚಿದ್ದಾರೆ. ಭಾರತ ಸುರಕ್ಷಿತವಾಗಿ ಇರಬೇಕಾದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದಿದ್ದಾರೆ. ನಾವು ದೇವೇಗೌಡರ ಹಾದಿಯಲ್ಲಿ ಸಾಗಬೇಕಾಗಿದೆ. ದೇವೇಗೌಡರು ಒಂದು ವರ್ಷದ ಹಿಂದೆಯೇ ಮೈತ್ರಿ ಮಾಡಿಕೊಂಡಿದ್ದರೆ ಕಾಂಗ್ರೆಸ್ ಸರ್ಕಾರ ಇರುತ್ತಿರಲಿಲ್ಲ. ನಾವೇ ಅಧಿಕಾರದಲ್ಲಿ ಇರುತ್ತಿದ್ದೇವು ಎಂದು ಬಂಡೆಪ್ಪ ಖಾಶೆಂಪುರ್ ರವರು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ನವ್ರಿಗೆ ಗ್ಯಾರಂಟಿಗಳ ಮೇಲೆ ವಿಶ್ವಾಸ ಹೋಗಿದೆ:
ಕಾಂಗ್ರೆಸ್ ನವರಿಗೆ ತಾವು ಜಾರಿಗೆ ತಂದ ಗ್ಯಾರಂಟಿಗಳ ಮೇಲೆ ವಿಶ್ವಾಸ ಹೋಗಿದೆ. ಈಗ ಅವರು ಚೊಂಬು ಹಿಡಿದುಕೊಂಡಿದ್ದಾರೆ. ಗ್ಯಾರಂಟಿ ಮರೆತುಬಿಟ್ಟಿದ್ದಾರೆ. ಚೊಂಬಿನ ಮೇಲೆ ಮತ ಕೇಳಲು ಮುಂದಾಗಿದ್ದಾರೆ. ಜನ ಅವರಿಗೆ ಪಾಠ ಕಲಿಸಬೇಕು. ಬೀದರ್ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಭಗವಂತ ಖೂಬಾರವನ್ನು ಗೆಲ್ಲಿಸಬೇಕು ಎಂದು ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆರವರು, ಭಗವಂತ ಖೂಬಾರವರು ಬೀದರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕೇಂದ್ರ ಸಚಿವರಾಗಿ ಕೂಡ ಉತ್ತಮವಾದ ಕೆಲಸ ಮಾಡಿದ್ದಾರೆ ಎಂದರು.ಖೂಬಾರವರು ಬೀದರ್ ಜಿಲ್ಲೆಗೆ ರೈಲ್ವೆ, ರೋಡ್ ಸೇರಿದಂತೆ ಅನೇಕ ಯೋಜನೆಗಳನ್ನು ತಂದಿದ್ದಾರೆ. ನಾವು ಅವರನ್ನು ಮತ್ತೊಮ್ಮೆ ಲೋಕಸಭೆಗೆ ಕಳುಹಿಸಿದರೆ ಇನ್ನಷ್ಟು ಅಭಿವೃದ್ಧಿ ಕೆಲಸಗಳಾಗಲಿವೆ. ಆಗಾಗಿ ಬೀದರ್ ಲೋಕಸಭಾ ಕ್ಷೇತ್ರದ ಜನರು ಖೂಬಾರವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆರವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸಂಜುರೆಡ್ಡಿ ನಿರ್ಣಾ, ಐಲಿಂಜಾನ್ ಮಠಪತಿ, ರಾಜು ಕಡ್ಯಾಳ, ದೇವೇಂದ್ರ ಸೋನಿ, ರಾಜಶೇಖರ ಜವಳೆ, ಸೂರ್ಯಕಾಂತ್ ದಂಡಿ, ರಾಜರೆಡ್ಡಿ ಶಹಬಾದ್, ಚಂದ್ರಯ್ಯ ಸ್ವಾಮಿ, ಸುರೇಶ್ ಮಾಶೆಟ್ಟಿ, ರವಿಸ್ವಾಮಿ, ಬೊಮ್ಮಗೊಂಡ ಚಿಟ್ಟವಾಡಿ, ಭಜರಂಗ ಖಾಶೆಂಪುರ್, ದತ್ತು ಕಾಡವಾದ, ಬಸವರಾಜ ಶಾಪೂರ ಸೇರಿದಂತೆ ಅನೇಕರಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)