ಬೆಂಗಳೂರು: ನಮಗೆ ಬೆಂಗಳೂರಿನ ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂಬ ಹೆಸರು ಬದಲಾವಣೆ ವಿಚಾರದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ
ಬೆಂಗಳೂರು ಉತ್ತರ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಮಾಡಿದ್ರೆ ಒಳ್ಳೆಯದು: ಡಿ.ವಿ.ಸದಾನಂದಗೌಡ
ಬೆಂಗಳೂರು ದಕ್ಷಿಣ ಎಂಬ ಹೆಸರು ಬಂದರೆ ಇಲ್ಲಿಗೆ ಕೈಗಾರಿಕೆಗಳು ಹೆಚ್ಚು ಬರುತ್ತವೆ. ನಾವೆಲ್ಲರೂ ಬೆಂಗಳೂರಿನವರು. ನಮ್ಮ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ನಮಗೆ ಬೆಂಗಳೂರಿನ ಹೆಸರನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಹೀಗಾಗಿ ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸರ್ಕಾರದ ಮಟ್ಟದಲ್ಲಿ ಹೆಸರು ಬದಲಾವಣೆಗೆ ಕ್ರಮವಹಿಸುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.
ಮೆಟ್ರೋ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರವಾಗಿ ಮೆಟ್ರೋ ಸಂಸ್ಥೆಗೆ ಡಿಪಿಆರ್ ಮಾಡಲು ಹೇಳಿದ್ದೇನೆ. ಭೂಸ್ವಾಧೀನ ತಪ್ಪಿಸುವುದು, ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು, ಹೊರಗಿನಿಂದ ಬರುವವವರು ಇಲ್ಲೇ ತಮ್ಮ ವಾಹನ ನಿಲ್ಲಿಸಿ ಮೆಟ್ರೋ ಮೂಲಕ ಬೆಂಗಳೂರಿಗೆ ತೆರಳುವಂತೆ ಮಾಡಲು ಹಾಗೂ ವಾಹನ ನಿಲುಗಡೆ ಸ್ಥಳ ನಿರ್ಮಿಸುವುದು ಸೇರಿದಂತೆ ಅನೇಕ ಆಲೋಚನೆಗಳಿವೆ. ಎಲ್ಲವೂ ಪ್ಲ್ಯಾನ್ ಆಗುತ್ತಿವೆ. ಶೀಘ್ರದಲ್ಲೇ ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು
![](https://ainlivenews.com/wp-content/uploads/2024/01/Ad-Banner-copy-scaled.jpg)