ಹುಬ್ಬಳ್ಳಿ : ರಾಜ್ಯಕ್ಕೆ ಬರುವ ಅನುದಾನದ ವಿಚಾರದಲ್ಲಿ ನಾನು ಸುಳ್ಳು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅವರು ಹೇಳುವುದೆಲ್ಲವೂ ಬರೀ ಸುಳ್ಳೇ. ಹಾಗೆ ನೋಡಿದರೆ ಈಗಾಗಲೇ ಹೇಳಿರುವ ಸುಳ್ಳುಗಳಿಗೆ ಹತ್ತು ಬಾರಿ ನಿವೃತ್ತಿ ಪಡೆಯಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಲ್ಲ ಅವರು ಸುಳ್ಳುರಾಮಯ್ಯ. ಸುಳ್ಳು ಹೇಳುವುದೇ ಅವರ ಸ್ವಭಾವ. ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ. ಸರ್ಕಾರವನ್ನು ಸರಿಯಾಗಿ ನಿರ್ವಹಿಸಲಾಗದೇ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರಷ್ಟೇ ಎಂದರು. ಎನ್ಡಿಆರ್ಎಫ್ ಫಂಡ್ನಲ್ಲಿ ಯುಪಿಎ ಯಾವತ್ತು ಹೆಚ್ಚು ಹಣ ಕೊಟ್ಟಿರಲಿಲ್ಲ. ಆದರೆ, ಹೆಚ್ಚುವರಿ ಮಾತ್ರ ಅಲ್ಲ. ಅಡ್ವಾನ್ಸ್ ದುಡ್ಡನ್ನೇ ನಾವು ಕೊಟ್ಟಿದ್ದೇವೆ.
Coffee Vs Tea: ಬ್ಲ್ಯಾಕ್ ಕಾಫಿ ಮತ್ತು ಬ್ಲ್ಯಾಕ್ ಟೀ ನಡುವಿನ ವ್ಯತ್ಯಾಸಗಳು: ಯಾವುದು ಆರೋಗ್ಯಕರ..?
ಇನ್ನು ಒಂದೇ ಒಂದು ರೂ. ಜಿಎಸ್ಟಿ ಹಣ ಬಾಕಿ ಇಟ್ಟುಕೊಂಡಿಲ್ಲ. 10 ವರ್ಷ ಮೋದಿ ಅವರ ಅವಧಿಯಲ್ಲಿ ಕೇಂದ್ರ ಪಾಲಿನ ಹಂಚಿಕೆಯಲ್ಲಿ 2.85 ಲಕ್ಷ ಕೋಟಿ ಕೊಟ್ಟಿದ್ದೇವೆ ಎಂದು ವಿವರಿಸಿದರು. ಕೇಂದ್ರದಿಂದ ಯಾವುದೇ ವಿಶೇಷ ಗ್ರ್ಯಾಂಟ್ ಕೊಟ್ಟಿಲ್ಲ ಅಂತಿದ್ದಾರೆ. ಆದರೆ ಕರ್ನಾಟಕ ಸರ್ಕಾರಕ್ಕೆ 50 ವರ್ಷ ಅವಧಿಗೆ ₹6279 ಕೋಟಿ ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ ಎಂದು ಜೋಶಿ ಸ್ಪಷ್ಟಪಡಿಸಿದರು.