ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡ್ಬೇಕು ನಮಗೆ ಗೊತ್ತು,
ರಾಮನಗರ ಹೆಸರು ಬರಬಾರದು ಎಂದು ಯಾರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಂವಿಧಾನದಲ್ಲಿ ಯಾರನ್ನ ಕೇಳ್ಬೇಕು ಅಂತೇನಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುತ್ತೇವೆ ಎಂದರು.
Hyperloop: 30 ನಿಮಿಷಗಳಲ್ಲಿ 300 ಕಿ.ಮೀ ಪ್ರಯಾಣ! ಬುಲೆಟ್ ರೈಲಿಗಿಂದ ಸ್ಪೀಡ್ ಆಗಿ ಚಲಿಸಲಿದೆ ಈ ಟ್ರೈನ್
ರಿಯಲ್ ಎಸ್ಟೇಟ್ಗಾಗಿ ರಾಮನಗರ ಹೆಸರನ್ನು ಬದಲಾಯಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರು ಬೆಂಗಳೂರಿಗೆ ಬಂದಿದ್ದು ಯಾಕೆ? ಕನಕಪುರದವರಿಗೆ, ರಾಮನಗರದವರಿಗೆ ಏನೂ ಬೇಡ್ವಾ ಎಂದು ಪ್ರಶ್ನಿಸಿದರು.