ಮೈಸೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಾಕಷ್ಟು ಅಳೆದೂ ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಸದ್ಯ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಯಾವುದೇ ಅಭ್ಯರ್ಥಿಗಳನ್ನು ಘೋಷಿಸದೆ ಪೆಂಡಿಂಗ್ ಉಳಿಸಿಕೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಸಂಬಂಧ ಮಾತನಾಡಿದ ಸಿಎಂ, ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ.
ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಅದು ಸಾಧ್ಯನಾ? ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿಗೆ ಪ್ರಶ್ನೆ ಮಾಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಅದರಂತೆ ಇವರ ಮೈತ್ರಿಯೂ ಅನುಕೂಲ ಆಗಲ್ಲ. ಅವರ ಮೈತ್ರಿ ನಮಗೆ ಅನುಕೂಲ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ 10% ಈಡೇರಿಸಿಲ್ಲ. ಮೋದಿಯವರು ಜನಕ್ಕೆ 15 ಲಕ್ಷ ಕೋಟ್ರಾ? ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುದ್ರಾ? ರೈತರ ಆದಾಯ ಡಬಲ್ ಮಾಡುದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಸರಣಿ ಪ್ರಶ್ನೆ ಕೇಳಿದರು.