ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರ ವಿವಾದಾತ್ಮಕ ಕ್ಯಾಚ್ ಬಗ್ಗೆ ಹರಿಣ ಪಡೆಯ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ಪ್ರತಿಕ್ರಿಯೆ ನೀಡಿದ್ದಾರೆ.
ಜೂನ್ 29 ರಂದು ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 177 ರನ್ಗಳ ಗುರಿಯನ್ನು ಹಿಂಬಾಲಿಸಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಕೊನೆಯ ಓವರ್ನಲ್ಲಿ 16 ರನ್ಗಳ ಅಗತ್ಯವಿತ್ತು. 20ನೇ ಓವರ್ ಮೊದಲನೇ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಹಾಕಿದ್ದ ಫುಲ್ ಟಾಸ್ಗೆ ಡೇವಿಡ್ ಮಿಲ್ಲರ್ ಸಿಕ್ಸರ್ ಹೊಡೆಯಲು ಪ್ರಯತ್ನಿಸಿದ್ದರು.
2007 ODI World Cup: ಅಂದು ಅವಮಾನವಾಗಿದ್ದ ಜಾಗದಲ್ಲೇ ಇಂದು ಸನ್ಮಾನ: ನೆನಪಿದೆಯಾ ಆ ದಿನಗಳು!
ಈ ಕ್ಯಾಚ್ ಪಂದ್ಯದ ದಿಕ್ಕನ್ನು ಬದಲಾಯಿಸಿತ್ತು. ಡೇವಿಡ್ ಮಿಲ್ಲರ್ ಔಟ್ ಆದ ಬಳಿಕ ಭಾರತ ತಂಡ ಅಂತಿಮವಾಗಿ 7 ರನ್ಗಳಿಂದ ಗೆಲುವು ಪಡೆದಿತ್ತು. ಆದರೆ, ಸೂರ್ಯಕುಮಾರ್ ಯಾದವ್ ಅವರ ಕ್ಯಾಚ್ ವಿವಾದವನ್ನು ಹುಟ್ಟು ಹಾಕಿತ್ತು.
ತಮ್ಮ ಅಧೀಕೃತ ಯುಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿದ ಎಬಿ ಡಿ ವಿಲಿಯರ್ಸ್ ಅವರು ಕೂಡ ಸೂರ್ಯಕುಮಾರ್ ಯಾದವ್ ಪಡೆದಿದ್ದ ವಿವಾದಾತ್ಮಕ ಕ್ಯಾಚ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಇದನ್ನು ವಿವಾದಾ ಸೃಷ್ಟಿಸಲು ಎಬಿಡಿ ಮುಂದಾಗಲಿಲ್ಲ. ಈ ಹಿಂದಿನ ಪಂದ್ಯಗಳ ಬಗ್ಗೆ ಮಾತನಾಡಿ ಒತ್ತಡಕ್ಕೆ ಒಳಗಾಗಬಾರದು. ಇದರಿಂದ ತಂಡ ಕಲಿತು ಮುಂದೆ ಸಾಗಬೇಕೆಂದು ಸಲಹೆ ನೀಡಿದ್ದಾರೆ.