ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರ, ಶಾಸಕ ಎಎಸ್ ಪೊನ್ನಣ್ಣ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
MUDA Site Scandal: ಎಲ್ಲವನ್ನೂ ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಗೃಹಸಚಿವ ಜಿ. ಪರಮೇಶ್ವರ್
![Demo](https://ainlivenews.com/wp-content/uploads/2023/12/spoorthi-1.jpg)
ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಎರಡು ಮೂರು ದಿನಗಳಿಂದ ಪ್ರತಿಪಕ್ಷಗಳು ಮುಡಾ ಹಗರಣ ವಿಚಾರ ಪ್ರಸ್ತಾಪ ಮಾಡುತ್ತಿವೆ. ಸಿಎಂ ಧರ್ಮಪತ್ನಿಗೆ ಪರಿಹಾರ ನೀಡಿದ ವಿಚಾರದಲ್ಲಿ ಹಗರಣ ದೊಡ್ಡದಾಗಿದೆ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ. ಮುಖ್ಯವಾಗಿ ಇದೊಂದು ಹಗರಣ ಎಂದು ತೋರಿಸುವ ಪ್ರಯತ್ನ ಆಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
1998 ರಲ್ಲಿ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲಾಗಿತ್ತು. ನಿಂಗಣ್ಣ ಎನ್ನುವವರಿಗೆ ಆ ಜಮೀನು ಸೇರಿತ್ತು. 2004ರಲ್ಲಿ ಮಲ್ಲಿಕಾರ್ಜುನ ಸ್ವಾಮಿಗೆ ಸೇಲ್ ಡೀಡ್ ಆಗಿತ್ತು. ಮಲ್ಲಿಕಾರ್ಜುನ ಸ್ವಾಮಿ ಸಿಎಂ ಸಿದ್ದರಾಮಯ್ಯರ ಧರ್ಮ ಪತ್ನಿಯ ಸಹೋದರ. 2005ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಅದನ್ನು ವ್ಯವಸಾಯೇತರ ಜಮೀನಾಗಿ ಪರಿವರ್ತಿಸಿದ್ದರು. 2010ರಲ್ಲಿ ದಾನ ಪತ್ರದ ಮೂಲಕ ಅವರ ಸಹೋದರಿ ಪಾರ್ವತಿಯವರಿಗೆ ವರ್ಗಾವಣೆ ಆಗಿತ್ತು ಎಂದು ಪೊನ್ನಣ್ಣ ಮಾಹಿತಿ ನೀಡಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)