ಬೆಂಗಳೂರು: ತೆಲೆಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಹೇಳಿಕೆ ಸಾಕಷ್ಟು ವೈರಲ್ ಆಗಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಸದನದ ಗೌರವ, ಸಭಾಧ್ಯಕ್ಷರ ಗೌರವ ಉಳಿಯಬೇಕಾದರೇ ಜಮೀರ್ ಕ್ಷಮೆ ಕೇಳಲಿ. ಯುಟಿ ಖಾದರ್ ಅವರು ಕಾಂಗ್ರೆಸ್ ಸ್ಪೀಕರ್ ಅಲ್ಲ, 224 ಶಾಸಕರಿಗೆ ರಕ್ಷಣೆ ಕೊಡುವವರು. ಅವರನ್ನು ಒಂದು ಧರ್ಮದ ಸೋಂಕಿಗೆ ಒಳಪಡಿಸುವುದು ಸರಿಯಲ್ಲ. ಚೈಲ್ಡಿಷ್ಗಳನ್ನು ಇಟ್ಟುಕೊಂಡು ಸದನದ ಗೌರವ ಉಳಿಸಲು ಆಗುತ್ತಾ? ಎಂದು ತಿರುಗೇಟು ನೀಡಿದರು.
ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.