ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಕಾವೇರಿ ಜಲಾನಯನ ಪ್ರದೇಶಗಳಿಂದ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶಿಸಿದ್ದು, ಈ ನೀರಿನ ಬಳಕೆಗೆ ಬೆಂಗಳೂರು ಜಲ ಮಂಡಳಿಗೆ ಅಧಿಕಾರ ನೀಡಿದೆ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ನವದೆಹಲಿಯಲ್ಲಿ (New Delhi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿ ನೀರು ಬಳಕೆಗೆ ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ಈ ನೀರಿನ ಬಳಕೆಗೆ ಸರ್ಕಾರ ಈಗ ಆದೇಶಿಸಿದೆ. ಇನ್ಮುಂದೆ ಕಡ್ಡಾಯವಾಗಿ ಈ ನೀರು ಬೆಂಗಳೂರಿಗೆ ಬಳಕೆಯಾಗಲಿದೆ ಎಂದರು.
ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಚರ್ಚೆ ಆರಂಭವಾಗಲಿದೆ. ಶೀಘ್ರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಲಿದೆ. ಬಳಿಕ ಇದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಬಹುದು. ಈ ಹಿನ್ನೆಲೆ ಕರ್ನಾಟಕ ಹೇಗೆ ತಯಾರಿಯಾಗಬೇಕು ಎನ್ನುವ ಬಗ್ಗೆ ವಕೀಲರ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು