ಬೆಂಗಳೂರು: ವರ್ಗಾವಣೆ ಬಗ್ಗೆ ಸಿಎಂ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೋ ಗೊತ್ತಿಲ್ಲ.
ಇದಕ್ಕೆ ಸ್ಪಷ್ಟೀಕರಣ ಕೊಡಬೇಕಾಗತ್ತೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದು ಏನು ಅಂತ ಇದರಲ್ಲಿ ಎಷ್ಟು ರಿಯಾಲಿಟಿ ಇದೆ ನೋಡಬೇಕು. ನಂತರ ಸಂಬಂಧ ಪಟ್ಟವರು ಸ್ವಷ್ಟನೆ ಕೊಡುತ್ತಾರೆ. ಕುಮಾರಸ್ವಾಮಿಯವರ ಆರೋಪಕ್ಕೆ ನಾನು ಉತ್ತರ ಕೊಡಲು ಆಗಲ್ಲ. ಸಂಬಂಧ ಪಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡಬೇಕಾಗುತ್ತದೆ. ಅದು ನನ್ನ ಇಲಾಖೆ ಅಲ್ಲ ನನಗೆ ಸಂಬಂಧಪಟ್ಟ ವಿಚಾರ ಇಲ್ಲ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು ತಪ್ಪು ಅಲ್ವಾ? ಇದನ್ನು ಮುಚ್ಚಿಕೊಳ್ಳಲು ಯತೀಂದ್ರ ವಿಡಿಯೋ ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಯತೀಂದ್ರ ಎಲ್ಲಿಯಾದರೂ ವರ್ಗಾವಣೆ ವಿಚಾರ ಮಾತಾಡಿದ್ದಾರಾ? ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆಗಾಗಿ ಹಣ ಪಡೆದಿಲ್ಲ. ಹಣ ಪಡೆದಿದ್ದರೆ ರಾಜಕೀಯದಿಂದ ನಿವೃತ್ತಿಯಾಗುವೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)