ಮೈಸೂರು: ಕೊಡಗು-ಮೈಸೂರಿನ (Kodagu-Mysuru) ಜನರು ಸ್ನೇಹಿತನಂತೆ ನನ್ನನ್ನು ಸ್ವಾಗತಿಸಿದ್ದೀರಿ. ಆ ಋಣವನ್ನು ತೀರಿಸಲು ಅವಕಾಶ ಕೊಡಿ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಮನವಿ ಮಾಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ (Mysuru Lok Sabha Constituency) ಟಿಕೆಟ್ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಪೋಸ್ಟ್ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ.
ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ. ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗು ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ.
Petrol-Diesel price Today: ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಇಂದು ಹೇಗಿದೆ..? ಇಲ್ಲಿದೆ ವಿವರ
ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ನನ್ನ ಮೇಲೆ ನಂಬಿಕೆ ಇಟ್ಟಿರುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ (PM Narendra Modi) ಅವರಿಗೂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರಿಗೂ, ಮಾನನೀಯ ಗೃಹಮಂತ್ರಿಗಳಾದ ಅಮಿತ್ ಷಾ ಅವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಿ ಎಲ್ ಸಂತೋಷ್ ಅವರಿಗೂ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷದ ಆತ್ಮ ಜೀವವಾಗಿರುವ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಪೋಸ್ಟ್ ಪ್ರಕಟಿಸಿದ್ದಾರೆ.