‘ಬಿಗ್ ಬಾಸ್ ಕನ್ನಡ ಸೀಸನ್ ಕುರಿತು ಒಂದಲ್ಲ ಒಂದು ಸುದ್ದಿಗಳು ಕೇಳಿ ಬರುತ್ತಲೆ ಇದೆ. 10ನೇ ಸೀಸನ್ ಮುಗಿದು ಮೂರು ತಿಂಗಳು ಕಳೆದರು ಬಿಗ್ ಬಾಸ್ ಕುರಿತು ಚರ್ಚೆಗಳು ನಡೆಯುತ್ತಲೆ ಇವೆ. ಇದೀಗ ಶೋ ಬಗ್ಗೆ ನಮ್ರತಾ ಮಾತನಾಡಿದ್ದಾರೆ.
ಬಿಗ್ ಬಾಸ್ನಲ್ಲಿ ಪ್ಲ್ಯಾನ್ ಮಾಡಿದಂತೆ ಯಾವುದೂ ನಡೆಯುತ್ತಿಲ್ಲ ಎಂದು ನಮ್ರತಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ‘ಬಿಗ್ ಬಾಸ್’ನಲ್ಲಿ ಇದ್ದಾಗ ವಿನಯ್ ಗೌಡ, ನಮ್ರತಾ, ರಕ್ಷಕ್ ಬುಲೆಟ್, ಈಶಾನಿ, ಮೈಕಲ್ ಅಜಯ್ ಮೊದಲಾದವರು ಒಟ್ಟಿಗೆ ಇದ್ದರು. ಇವರ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಬೆಳೆದಿತ್ತು. ‘ಬಿಗ್ ಬಾಸ್’ ಪೂರ್ಣಗೊಂಡ ಬಳಿಕ ಹೊರಗೆ ಪ್ರತಿ ವಾರ ಸಿಗೋಣ, ಪಾರ್ಟಿ ಮಾಡೋಣ ಎಂದೆಲ್ಲ ಪ್ಲ್ಯಾನ್ ಮಾಡಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಆರಂಭದಲ್ಲಿ ಕೆಲವು ಬಾರಿ ಇವರು ಭೇಟಿ ಆಗಿದ್ದು ಇದೆ. ಈಗ ಆ ರೀತಿಯ ಭೇಟಿಗಳು ನಿರಂತರವಾಗಿ ನಡೆಯುತ್ತಿಲ್ಲ ಎಂದು ನಮ್ರತಾ ಹೇಳಿದ್ದಾರೆ.
‘ದಿನವೂ ಸಿಗಬೇಕು ಇಲ್ಲವಾದರೆ ವಾರಕ್ಕೆ ಒಮ್ಮೆ ಆದರೂ ಸಿಗಬೇಕು ಎಂದು ಬಿಗ್ ಬಾಸ್ನಲ್ಲಿ ಪ್ಲ್ಯಾನ್ ಮಾಡಿದ್ವಿ. ಆದರೆ, ಅದೆಲ್ಲ ನಡೆಯುತ್ತಿಲ್ಲ. ನನ್ನ ಸರ್ಕಲ್ನಲ್ಲಿ ಇರುವವರನ್ನು ನನ್ನ ಬರ್ತ್ಡೇಗೆ ಕರೆದಿದ್ದೆ. ನಾನು ರೆಗ್ಯುಲರ್ ಆಗಿ ಯಾರ ಜೊತೆಗೂ ಕಂಟ್ಯಾಕ್ಟ್ ಇಲ್ಲ. ವಿನಯ್, ಈಶಾನಿ ಜೊತೆ ಆಗಾಗ ಕಾಲ್ನಲ್ಲಿ ಮಾತನಾಡುತ್ತೇನೆ. ರಕ್ಷಕ್, ಕಾರ್ತಿಕ್ ಹಾಗೂ ಇತರರು ಈವೆಂಟ್ನಲ್ಲಿ ಮಾತಾಡ್ತೀನಿ’ ಎಂದಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿದ್ದಾಗ ಅದೇ ಒಂದು ಲೋಕ ಎನಿಸುತ್ತದೆ. ಅಲ್ಲಿರುವ ಬಾಂಡಿಂಗ್ ಹೊರಗೂ ಮುಂದುವರಿಯುತ್ತದೆ ಎಂದು ಹೇಳೋದು ಕಷ್ಟ. ಹೊರಗೆ ಬಂದ ಬಳಿಕ ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿ ಇರುತ್ತಾರೆ. ಹೀಗಾಗಿ ಪದೇ ಪದೇ ಸಿಗೋದು ಅಸಾಧ್ಯವೇ ಎಂದು ಹೇಳಿದ್ದಾರೆ.