ಬಳ್ಳಾರಿ: ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ದೊಡ್ಡ ಮಟ್ಟದಲ್ಲಿ ರಂಗೇರ್ತಿದೆ, ಲಿಂಗಾಯತರಿಗೆ ಬಿಜೆಪಿ ಬಗೆಗಿನ ಮುನಿಸು ತಣಿಸಿ ಲಿಂಗಾಯತ ಮತಗಳನ್ನು ಬಿಜೆಪಿಗೆ ಗಟ್ಟಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ವೀವಿ ಸಂಘದ ಕಚೇರಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದಾರೆ. ಬಳ್ಳಾರಿಯ ವಿ.ವಿ ಸಂಘದ ಸದ್ಯಸ್ಯರ ಜತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ,
ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಮಾಡ್ತಾರೆ, ಯಡಿಯೂರಪ್ಪ ಅವರು ಆದೇಶ ಮಾಡಿದ್ರು, ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ, ಕಾಂಗ್ರೆಸ್ ಏನೇ ಹಾರಾಟ ಮಾಡಿದ್ರು, ನಮಗೆ ಲಾಭ ಆಗುತ್ತದೆ, ಬಿಜೆಪಿ- ಜೆಡಿಎಸ್ ಒಟ್ಟಾಗಿದೆ, ಬಹಳ ಅಂತರದಲ್ಲಿ ರಾಮುಲು ಗೆಲ್ತಾರೆ ಎಂದು ಹೇಳಿದರು.
ಇನ್ನೂ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇನ್ನೂ ನಾಮಪತ್ರ ವಾಪಾಸ್ ಪಡೆಯಲು ಸಮಯ ಇದೆ, ಕಾದು ನೋಡಿ, ಹೊಸ ಚರ್ಚೆಗಳು ಮಾಡಬೇಡಿ, ನಾವು 28 ಸ್ಥಾನಗಳು ಗೆಲ್ಲಬೇಕು ಅನ್ನೋ ಗುರಿ ಇದೆ ಅಷ್ಟೆ , ಹೆಚ್ಚು ಸ್ಥಾನ ಗೆದ್ರೆ, ವಿಜಯೇಂದ್ರ ಸ್ಥಾನ ಗಟ್ಟಿಯಾಗುತ್ತದೆ ಅನ್ನೋ ವಿಚಾರಕ್ಕೆ ಉತ್ತರ ಕೊಟ್ಟರು.