ಬೆಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ವೀಲ್ ಗಳು ಕಳಚಿಕೊಂಡ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಮಂದೂರು ಬಳಿ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಆನೇಕಲ್ ಘಟಕಕ್ಕೆ ಸೇರಿದ KA 42-F – 519 ಕೆ.ಎಸ್.ಆರ್.ಟಿ.ಸಿ ಬಸ್ ಆನೇಕಲ್ ಕಡೆಯಿಂದ ಸಮಂದೂರು ಮಾರ್ಗವಾಗಿ ಹೊರಟಿತ್ತು.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಸಮಂದೂರು ಸಮೀಪ ಬರುತ್ತಿದಂತೆ ಚಲಿಸುತ್ತಿರುವಾಗಲೇ ಏಕಾಏಕಿ ಬಸ್ ಟೈರ್ಗಳು ಕಳಚಿಕೊಂಡಿದೆ. ಸುಮಾರು ಇಪ್ಪತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಬಸ್ ಆಗಿದ್ದು, ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾನೆ. ಇದರಿಂದ ಭಾರಿ ಅವಘಡ ತಪ್ಪಿದೆ. ಡಿಪೋ ಅಧಿಕಾರಿಗಳ ಬೇಜಾವಬ್ದಾರಿಯಿಂದ ಈ ಘಟನೆ ನಡೆದಿದೆ.