ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬರುವಾಗ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪರ್ಪಲ್ ಲೈನ್ನ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಸಂಚಾರ ಪುನಾರಂಭವಾಗಿದೆ.
ಗುರುವಾರ ಮಧ್ಯಾಹ್ನ 2:10ರ ಸುಮಾರಿಗೆ ಮೆಟ್ರೋ ಹಳಿಗೆ ವ್ಯಕ್ತಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಹಳಿಗೆ ಧುಮುಕಿದ್ದು, ಮೆಟ್ರೊ ಆಡಳಿತ ಮಂಡಳಿ ಕೂಡಲೇ ಮೆಟ್ರೋ ರೈಲನ್ನು ನಿಲ್ಲಿಸಿದ್ದಾರೆ. ಬಳಿಕ ರೈಲ್ವೆ ಹಳಿಗೆ ಬಿದ್ದ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆಯಲು ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ.
BIGG BREAKING: ಮೆಟ್ರೋ ಟ್ರ್ಯಾಕ್ʼನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ: ವೈಟ್ ಫೀಲ್ಡ್- ಚಲ್ಲಘಟ್ಟ ಸಂಚಾರ ಸ್ಥಗಿತ!
ಘಟನೆಯಿಂದ ಚಲ್ಲಘಟ್ಟದಿಂದ ಮೆಜೆಸ್ಟಿಕ್ ಕಡೆಗೆ ಸಂಚಾರ ಮಾಡುತ್ತಿದ್ದ ಮೆಟ್ರೋ ರೈಲುಗಳಲ್ಲಿ ವ್ಯತ್ಯಯವುಂಟಾಗಿದೆ. ಮೆಟ್ರೋ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಸಾರಿಗೆ ಅವಲಂಭಿಸುವಂತೆ ಮನವಿ ಮಾಡಲಾಗಿದೆ. ಮಾಗಡಿ ರೋಡ್ನಿಂದ ಚಲ್ಲಘಟ್ಟ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದು, ವೈಟ್ ಫೀಲ್ಡ್ನಿಂದ ಮಾಗಡಿ ರೋಡ್ವರೆಗೂ ಮಾತ್ರ ಮೆಟ್ರೋ ಸೇವೆ ಲಭ್ಯವಿದೆ.
ಸ್ಥಗಿತಗೊಂಡಿದ್ದ ಮೆಟ್ರೋ ಪುನಾರಂಭ
ಪ್ರಕರಣ ಸಂಬಂಧ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿತ್ತು. ಮಾಗಡಿ ರೋಡ್ನಿಂದ ವೈಟ್ ಫೀಲ್ಡ್ವರೆಗೆ ಮಾತ್ರ ಮೆಟ್ರೋ ಸಂಚಾರ ಇತ್ತು. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇನ್ನು ವಿಷಯ ತಿಳಿಯದ ಪ್ರಯಾಣಿಕರು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದು, ಅಂತವರನ್ನು ಮೆಟ್ರೋ ಸಿಬ್ಬಂದಿ ಬಸ್ ಮೂಲಕ ತೆರಳುವಂತೆ ಹೇಳಿ ಕಳುಹಿಸುತ್ತಿದ್ದರು. ಇದೀಗ ಮೃತ ದೇಹವನ್ನು ಹಳಿಯಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಸ್ಥಗಿತಗೊಂಡಿದ್ದ ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.