ಬೆಂಗಳೂರು:- ಕಾಂಗ್ರೆಸ್ ನ ಗಿಮಿಕ್ ಗ್ಯಾರಂಟಿ ನಂಬಲು ಯಾರೂ ಸಿದ್ಧರಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರಕಾರದ ಗಿಮಿಕ್ ಗ್ಯಾರಂಟಿಯನ್ನು ನಂಬಲು ಯಾರೂ ಸಿದ್ಧರಿಲ್ಲ ಎಂಬುದು ಪಂಚರಾಜ್ಯಗಳ ಚುನಾವಣ ಫಲಿತಾಂಶದಿಂದ ಸಾಬೀತಾಗಿದ್ದು, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದನ್ನು ತಡೆಯಲು ಯಾವ ದುಷ್ಟ ಶಕ್ತಿಗಳಿಗೂ ಸಾಧ್ಯವಿಲ್ಲ ಎಂದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ರಾಜ್ಯದ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು.
ಕೋಟ್ಯಂತರ ಹಿಂದೂಗಳು ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದು, ಮನೆಮನೆಗಳಲ್ಲಿ ಹಬ್ಬದ ವಾತಾವರಣವಿದೆ. ಆದರೆ ಭಗವಾನ್ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷದವರು ವಿಧಿ ಇಲ್ಲದೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಲು ಸುತ್ತೋಲೆ ಹೊರಡಿಸಿದೆ. ಇದು ರಾಮಭಕ್ತರಿಗೆ ಸಂದ ಜಯ ಎಂದು ತಿಳಿಸಿದರು.