ನವದೆಹಲಿ:- ಚುನಾವಣೆ ಟೈಮಲ್ಲೇ ದೆಹಲಿ ಸಿಎಂ ಬಂಧನ ಯಾಕೆ..!? ಎಂದು ಇಡಿಗೆ ಸುಪ್ರೀಂ ನೇರ ಪ್ರಶ್ನೆ ಮಾಡಿದೆ.
ವಿಚಾರಣೆಯ ಸಂದರ್ಭದಲ್ಲಿ ಮಾರ್ಚ್ 21ರಂದು ಇಡಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ವಕೀಲ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ ವಾದವನ್ನು ನ್ಯಾಯಾಲಯ ಪರಿಗಣಿಸಿತು.
![Demo](https://ainlivenews.com/wp-content/uploads/2023/12/spoorthi-1.jpg)
ಅಶ್ಲೀಲ ಚಿತ್ರಕ್ಕೆ DCM ಡಿಕೆಶಿ ಫೋಟೋ ಮಾರ್ಫಿಂಗ್..ಮೂರು ಮಂದಿ ವಿರುದ್ಧ ದಾಖಲಾಯ್ತು FIR!
ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಸಮಯದ ಕುರಿತು ಪ್ರತಿಯಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರನ್ನು ಕೇಳಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಜೀವನ ಮತ್ತು ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ. ಅದನ್ನು ನೀವು ಅಲ್ಲಗಳೆಯುವಂತಿಲ್ಲ ಎಂದು ಹೇಳಿದೆ. ಲೋಕಸಭಾ ಚುನಾವಣೆಗೂ ಮುನ್ನವೇ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಕಾರಣ ಏನೆಂದು ಕೋರ್ಟ್ ಪ್ರಶ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಶುಕ್ರವಾರದವರೆಗೆ ಗಡುವು ನೀಡಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅಕ್ರಮ ಹಣ ವರ್ಗಾವಣೆಯ ಬಗ್ಗೆ ಸಾಕ್ಷಿಗಳು ಇಲ್ಲ. ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂಬುವುದಕ್ಕೆ ದಾಖಲೆಗಳಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ
![](https://ainlivenews.com/wp-content/uploads/2024/01/Ad-Banner-copy-scaled.jpg)