ಚಾಮರಾಜನಗರ:- ಫೆಬ್ರವರಿಯಲ್ಲಿಯೇ ಬೇಸಿಗೆಯ ಬಿರುಬಿಸಿಲು ಇದ್ದು, ಬಿರುಬಿಸಿಲಿನ ಶಾಖ ತಾಳಲಾರದೆ ವನ್ಯಜೀಬಿಗಳು ಪರದಾಡುತ್ತಿವೆ.
ಮರದ ನೆರಳು ಕೂಡ ಶಾಖದ ಗೂಡಾಗುತ್ತಿದೆ. ಹೀಗಾಗಿ ಹೈರಾಣಾದ ವನ್ಯಜೀವಿಗಳು ನೀರಿನತ್ತ ಪಯಣ ಬೆಳೆಸಿವೆ. ನೀರು ಕಂಡ ಕೂಡಲೆ ನೀರಿಗಿಳಿದು ತಣಿಸಿಕೊಳ್ಳುತ್ತಿವೆ. ಚಾಮರಾಜನಗರ ಜಿಲ್ಲೆಯ ಪಿಜಿ ಪಾಳ್ಯದ ಸಫಾರಿ ವಲಯದಲ್ಲಿ ಪ್ರವಾಸಿಗರಿಗೆ ಈ ದೃಶ್ಯ ಕಂಡು ಬಂದಿದೆ.
ಬೇಸಿಗೆಯ ಬಿರುಬಿಸಿಲು ತಾಳಲಾರದೆ ಆನೆಗಳ ದಂಡು ನೀರಿಗಿಳಿದಿದೆ. ಪಿಜಿಪಾಳ್ಯದ
ಸಫಾರಿ ಮಾರ್ಗದಲ್ಲಿ ವನ್ಯ ಜೀವಿಗಳು ನೀರಿರುವ ಕಡೆ ವಲಸೆ ಹೋಗುತ್ತಿದ್ದು, ಕಾಡಾನೆ ಮತ್ತು ಕಾಡೆಮ್ಮೆ ಸೇರಿ ಹಲವು ಪ್ರಾಣಿಗಳ ಬೇಸಿಗೆ ಸಂಚಾರ ಮಾಡುತ್ತಿದೆಸಫಾರಿ ವಿಕ್ಷಣೆಗೆ ಆಗಮಿಸಿದ್ದವರ ದೃಶ್ಯ
ಕ್ಯಾಮೆರಾದಲ್ಲಿ ಸೆರೆಯಾಗಿದೆ.