ಬೆಂಗಳೂರು: ಬಿಜೆಪಿಯ ಸುನಿಲ್ ಕುಮಾರ್, ಸಚಿವರಿಗೆ ಜನರ ಮೇಲೆ ಪ್ರೀತಿಯೋ, ಪ್ರಾಣಿಗಳ ಪ್ರೀತಿಯೋ ಎಂದರು. ಮತ್ತೊಬ್ಬ ಸದಸ್ಯ ಆರಗ ಜ್ಞಾನೇಂದ್ರ, ವನ್ಯ ಜೀವಿ ಸಂಘರ್ಷ ರಾಜ್ಯದ ಎಲ್ಲ ಕಡೆ ಹೆಚ್ಚುತ್ತಿದೆ. ಹಿಂದೆ ರಾಜಾಳ್ವಿಕೆಯಲ್ಲಿ ವನ್ಯಪ್ರಾಣಿಗಳು ಹೆಚ್ಚಾದಾಗ ಬೇಟೆಯಾಡಲು ಅವಕಾಶವಿತ್ತು. ಆ ಮಾದರಿಯಲ್ಲಿ ವನ್ಯಜೀವಿಗಳ ದಾಳಿ ತಡೆಗೆ ಸರ್ಕಾರ ಕೊಂಚ ನಿಯಮ ಸಡಿಲ ಮಾಡಬೇಕು ಎಂದು ವಾದಿಸಿದರು.
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
ಇದಕ್ಕೆ ಸಚಿವರು, ಬೆಂಗಳೂರಿಗೆ ಬಂದ ಚಿರತೆ ಸೆರೆ ಹಿಡಿಯುವಾಗ 4 ಜನರ ಮೇಲೆ ದಾಳಿ ಮಾಡಿತು. ಹಾಗಾಗಿ ಅದಕ್ಕೆ ಗುಂಡು ಹಾರಿಸಬೇಕಾಯಿತು. ಆದರೆ, ಜವಾಬ್ದಾರಿಯುತ ಸರ್ಕಾರವಾಗಿ ಮನುಷ್ಯರ ಜೀವ, ಜೀವನೋಪಾಯಕ್ಕೂ ತೊಂದರೆ ಆಗದಂತೆ ಜೊತೆಗೆ ವನ್ಯಪ್ರಾಣಿಗಳನ್ನೂ ಸಂರಕ್ಷಿಸುವ ಕೆಲಸ ಮಾಡಬೇಕಾಗುತ್ತದೆ. ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.