ಮೈಸೂರು: ಚಾಮುಂಡಿಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಚಾಮುಂಡಿಬೆಟ್ಟದಲ್ಲಿ ನಾಡದೇವತೆ ನೆಲೆಸಿದ್ದು, ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಹೀಗಾಗಿ ಅಲ್ಲಿಗೆ ಕೇವಲ ಪ್ರವಾಸಿ ಉದ್ದೇಶದಿಂದ ರೋಪ್ ವೇ ಅಗತ್ಯವಿಲ್ಲ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ,” ಎಂದು ಹೇಳಿದರು.
“ಮೈಸೂರಿನಲ್ಲಿರುವ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ. ಮೈಸೂರು ಪಾರಂಪರಿಕ ಕಟ್ಟಡಗಳ ನಗರವಾಗಿದ್ದು, ದೇವರಾಜ ಮಾರುಕಟ್ಟೆ, ಲ್ಯಾಸ್ಸ್ಡೌನ್ ಕಟ್ಟಡಗಳನ್ನು ನೆಲಸಮ ಮಾಡುವ ಅವಶ್ಯಕತೆ ಇಲ್ಲ. ಎರಡೂ ಕಟ್ಟಡಗಳನ್ನು ಸಂರಕ್ಷಣೆ ಮಾಡುತ್ತೇವೆ. ವಿಮಾನ ನಿಲ್ದಾಣ ವಿಸ್ತರಣೆ, ಹೆಚ್ಚು ವಿಮಾನಗಳ ಹಾರಾಟಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.
Bananas For Diabetics: ಸಕ್ಕರೆ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಬಹುದಾ? ಇಲ್ಲಿದೆ ನೋಡಿ ಉತ್ತರ
”ಮೈಸೂರು–ಕೊಡಗು ಜಿಲ್ಲೆಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರವಾಸ ಮಾಡಿ ಜನರ ಸಮಸ್ಯೆ ಆಲಿಸುತ್ತೇನೆ. ಇಂದಿನಿಂದ ನರಸಿಂಹರಾಜ ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ್ದೇನೆ. ಆ ಭಾಗದಲ್ಲಿ ಪಾದಯಾತ್ರೆ ಮಾಡಿ ಪರಿಶೀಲಿಸುತ್ತೇನೆ. ಮೈಸೂರು– ಕೊಡಗು ದೊಡ್ಡ ಕ್ಷೇತ್ರ. ಇಲ್ಲಿನ ಜನರನ್ನು ಭೇಟಿಯಾಗುವುದೇ ಸವಾಲು. ಆದರೆ, ಸಮಯ ತೆಗೆದುಕೊಂಡು ಜನರನ್ನು ಭೇಟಿ ಆಗುತ್ತೇನೆ. ಭ್ರಷ್ಟಮುಕ್ತ ತತ್ವದೊಡನೆ ಕೆಲಸ ಮುಂದುವರಿಸುತ್ತೇನೆ,” ಎಂದರು.