ಬೆಂಗಳೂರು: ಜೆಡಿಎಸ್ ಜತೆ ಹೊಸದಾಗಿ ನಮ್ಮ ಮೈತ್ರಿ ಆಗಿದೆ. ಪ್ರಜ್ವಲ್ಗೆ ಟಿಕೆಟ್ ಕೊಡಲಾಗಿದೆ, ಜೆಡಿಎಸ್ ಅವರನ್ನು ಸಸ್ಪೆಂಡ್ ಮಾಡಿದೆ. ಪ್ರಜ್ವಲ್ ಗೆದ್ದ ಮೇಲೆ ಜೆಡಿಎಸ್ ಸಂಸದ ಆಗ್ತಾರಾ?. ಎನ್ಡಿಎ ಸಂಸದ ಆಗ್ತಾರಾ ಅಂತ ಗೊಂದಲ ಇದೆ. ಇದರ ಬಗ್ಗೆ ವರಿಷ್ಠರಿಂದ ಸ್ಪಷ್ಟನೆ ಪಡೆಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳೀದ್ದಾರೆ.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಗೆದ್ದ ಮೇಲೆ ಜೆಡಿಎಸ್ ಸಂಸದ ಆಗ್ತಾರಾ?. ಎನ್ಡಿಎ ಸಂಸದ ಆಗ್ತಾರಾ ಅಂತ ಗೊಂದಲ ಇದೆ. ಇದರ ಬಗ್ಗೆ ವರಿಷ್ಠರಿಂದ ಸ್ಪಷ್ಟನೆ ಪಡೆಯುತ್ತೇವೆ. ಮೈತ್ರಿ ಮೇಲೆ ಪರಿಣಾಮ ವಿಚಾರ ಇಲ್ಲ, ಈಗಾಗಲೇ ಕುಮಾರಸ್ವಾಮಿ ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಅಂದಿದ್ದಾರೆ. ಹೀಗಾಗಿ ಪ್ರಜ್ವಲ್ ಕೇಸ್ ರೇವಣ್ಣ ಬಂಧನದಿಂದ ಬಿಜೆಪಿಗೆ ಮುಜುಗರ ಆಗಿದೆ ಎಂಬ ಪ್ರಶ್ನೆ ಉದ್ಭವ ಆಗಲ್ಲ ಎಂದರು.