ಹುಬ್ಬಳ್ಳಿ: ಲೋಕಸಭಾ ಚುನಾವಣೆ ಅಂಗವಾಗಿ ಹಾವೇರಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾರತೀಯ ಜನತಾ ಪಕ್ಷದ ಮುಖಂಡ ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಮಾತಾನಾಡಿದರು.
ಹಾವೇರಿ – ಗದಗ ಲೋಕಸಭಾ ಅಭ್ಯರ್ಥಿಗಳು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲು ಕಾರ್ಯೋನ್ಮುಕರಾಗೋಣ ಎಂದು ತಿಳಿಸಿ, ಪಕ್ಷವನ್ನು ಸಂಘಟಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ ಸದಸ್ಯರಾದ ಶಿವರಾಜ ಸಜ್ಜನ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ, ನಂಜುಂಡೇಶ್ ಕಳ್ಳೇರ್, ಗಿರೀಶ ತುಪ್ಪದ, ಬಸವರಾಜ ಕಳಸೂರ್ ಸೇರಿದಂತೆ ಇನ್ನಿತರ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.