ಹುಬ್ಬಳ್ಳಿ:- ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವೇನಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೆಳಗಾವಿಯಲ್ಲಿ ಗೆಲುವು ಸಾಧಿಸುವುದು ಕಷ್ಟವಾಗಲಾರದು ಯಾಕೆಂದರೆ ಸುರೇಶ್ ಅಂಗಡಿಯವರು ಜಿಲ್ಲಾಧ್ಯಕ್ಷ ಮತ್ತು ತಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಬೆಳಗಾವಿಯಲ್ಲಿ ಸಾಕಷ್ಟು ಸಂಘಟನಾ ಕೆಲಸ ಮಾಡಿದ್ದಲ್ಲದೆ ಎರಡು ಬಾರಿ ಜಿಲ್ಲಾ ಉಸ್ತುವಾರಿ ಕೆಲಸ ಮಾಡಿದ ಅಂಶವೂ ನೆರವಾಗಲಿದೆ ಎಂದು ಹೇಳಿದರು.
ಹಾಲಿ ಸಂಸದೆ ಮಂಗಳಾ ಅಂಗಡಿಯವರು ಸಹ ತನ್ನ ಪರವಾಗಿ ಪ್ರಚಾರ ಮಾಡುವ ಭರವಸೆ ನೀಡಿರುವರೆಂದು ಹೇಳಿದ ಶೆಟ್ಟರ್ ಚುನಾವಣೆಗಳಲ್ಲಿ ಜಾತಿ ಲೆಕ್ಕಾಚಾರ ಕೆಲಸ ಮಾಡಲ್ಲ, ತಾನು ಹುಬ್ಬಳ್ಳಿಯವನಾದರೂ ಇಡೀ ರಾಜ್ಯದ ನಾಯಕನಾಗಿ ಬೆಳೆದಿರುವೆ, ಮತ್ತು ಪ್ರತಿ ಚುನಾವಣೆಯನ್ನು ಗಂಬೀರವಾಗಿ ಎದುರಿಸುವ ಜಾಯಮಾನ ತನ್ನದು ಎಂದರು. ಹುಬ್ಬಳ್ಳಿ ತನ್ನ ಜನ್ಮಭೂಮಿಯಾದರೆ ಬೆಳಗಾವಿ ಕರ್ಮಭೂಮಿಯಾಗಲಿದೆ ಎಂದು ಅವರು ಹೇಳಿದರು