ಹುಬ್ಬಳ್ಳಿ, ಮೇ 15: ಯುವತಿಯನ್ನು ಪಾಗಲ್ ಪ್ರೇಮಯೊಬ್ಬನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಕಾಕತಾಳೀಯ ಎಂಬಂತೆ ನಿರಂಜನ ಹಿರೇಮಠ ವಾರ್ಡ್ನಲ್ಲಿಯೇ, ನೇಹಾ ಹತ್ಯೆ ಮಾದರಿಯಲ್ಲಿ ಮತ್ತೊಂದು ಹತ್ಯೆಯಾಗಿದೆ. ಕೊಲೆಯಾದ ಅಂಜಲಿ ಕುಟುಂಬಸ್ಥರನ್ನು ನಿರಂಜನ ಹಿರೇಮಠ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾಧ್ಯಮದವವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಮಗಳು ನೇಹಾ ಕಳೆದುಕೊಂಡ ದುಃಖದಲ್ಲಿದ್ದೇವೆ. ಈಗ ನಮ್ಮ ವಾರ್ಡ್ನ ಮಗಳನ್ನು ಕಳೆದುಕೊಂಡಿದ್ದೇವೆ. ಇನ್ನೂ ಎಷ್ಟು ಬಲಿಯಾ ಗಬೇಕು. ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಂಡತಿಯ ಪ್ರಜ್ಞೆ ತಪ್ಪಿಸಿ ಪರಪುರಷರಿಂದ ಅತ್ಯಾಚಾರ ಮಾಡಿಸ್ತಿದ್ದ ಪತಿ.! ಪಾಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?
ಇದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ಹುಬ್ಬಳ್ಳಿಗೆ ದಕ್ಷ ಪೊಲೀಸ್ ಅಧಿಕಾರಿ ಬೇಕು. ಗೃಹ ಇಲಾಖೆ ನಿರ್ಲಕ್ಷ್ಯ ಮಾಡಿದೆ, ನಿಮಗೆ ನಿಭಾಯಿಸಲು ಆಗದೆ ಹೋದರೆ ರಾಜೀನಾಮೆ ಕೊಡಿ ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಆರೋಪಿಯನ್ನು ಎನ್ಕೌಂಟರ್ ಮಾಡಬೇಕು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಎನ್ಕೌಂಟರ್ ಮಾಡಿದ್ದರೆ ಹೀಗೆ ಆಗುತ್ತಿರಲ್ಲಲ್ಲ ಎಂದು ಹೇಳಿದ್ದಾರೆ.