ದಾವಣಗೆರೆ: ಅಡಿಕೆ ಗಿಡಗಳನ್ನು ಕಡಿದಿದ್ದರಿಂದ ಕೋಪಗೊಂಡ ಆರೋಪಿಗಳು ಮಹಿಳೆಯನ್ನು ಕೊಲೆ ಮಾಡಿ ಬಳಿಕ ಆಕೆಯನ್ನು ಭದ್ರಾ ನಾಲೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಗಳನ್ನು ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಕೆರೆ ಗೇಟ್ ನಿವಾಸಿ ಕುಮಾರ್ ಎಚ್ ಜಿ(೫೦) ಹಾಗೂ ಅರಕೆರೆ ಗ್ರಾಮದ ಚಿದಾನಂದಪ್ಪ(೫೪) ಬಂಧಿತ ಆರೋಪಿಗಳು.
ಕಳೆದ ಮೇ 9 ರಂದು ಕಣಿವೆ ಬಿಳಚಿ ಬಳಿಯ ಭದ್ರಾ ನಾಲೆಯಲ್ಲಿ ಮಹಿಳೆಯ ಶವವೊಂದು ಪತ್ತೆ ಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಬಸವಾಪಟ್ಟಣ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಶವವಾಗಿ ಪತ್ತೆಯಾದ ಮಹಿಳೆ ಶಿವಮೊಗ್ಗ ಜಿಲ್ಲೆ ಅರಕೆರೆ ಗ್ರಾಮದ ನೇತ್ರಾವತಿ(೪೭) ಎಂದು ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಆಕೆಯ ಸಂಬಂಧಿಕರನ್ನು ಪತ್ತೆ ಮಾಡಿ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡಿದ್ದರು.
ಬಳಿಕ ಕೊಲೆಯ ಜಾಡು ಹಿಡಿದಾಗ ಕೊಲೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಕಳೆದ ಏ.20 ರಂದು ಆರೋಪಿಗಳ ತೋಟದಲ್ಲಿನ ಅಡಿಕೆ ಗಿಡಗಳನ್ನು ಕೊಲೆಯಾದ ನೇತ್ರಾವತಿ ಕಡಿದು ಹಾಕಿದ್ದಳು. ಇದರಿಂದ ಆಕೆಯನ್ನು ಕೊಲೆ ಮಾಡಿ ಭದ್ರಾ ನಾಲೆಗೆ ಹಾಕಿದ್ದರು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕೇಸ್ ನ್ನು ಬೇಧಿಸುವಲ್ಲಿ ಸಂತೆಬೆನ್ನೂರು ಸಿಪಿಐ ಗೋಪಾಲ ನಾಯ್ಕ್,ಪಿಎಸ್ಐ ವೀಣಾ.ಕೆ, ಸೇರಿದಂತೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.