ತುಮಕೂರು: ಅನುಮಾನಸ್ಪದವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿ ರೈಲ್ವೆ ಹಳಿ ಮೇಲೆ ಶವ ಪತ್ತೆಯಾಗಿದೆ. ಅನ್ನಪೂರ್ಣ 50 ಮೃತ ದುರ್ದೈವಿಯಾಗಿದ್ದು, ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯರ ಬೋಗಿಯಲ್ಲಿದ್ದ ಅನ್ನಪೂರ್ಣ ಲಗೇಜ್ ಗಳು ಸುಮಾರು 20 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿವೆ. ತಲೆಗೆ ಕೈಗೆ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು,
ಚಿನ್ನಾಭರಣಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರೈಲಿನಿಂದ ತಳ್ಳಿರಬಹುದು ಎಂದು ಕುಟುಂಬಸ್ಥರಿಂದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಅರಣ್ಯ ಭವನದಲ್ಲಿ ಸ್ಟೆನೋ ಅಧಿಕಾರಿಯಾಗಿದ್ದ ಅನ್ನಪೂರ್ಣ ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಇನ್ನೂ ಘಟನೆ ಸಂಬಂಧ ತುಮಕೂರು ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.