ಬೆಂಗಳೂರು: ತೆಲಂಗಾಣದ ಜನರಿಗೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಆರು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಮೊದಲ ಗ್ಯಾರಂಟಿಯನ್ನು ಈಡೇರಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದೆ ಎಂಬುದನ್ನು ಸಾಬೀತುಪಡಿಸಿದ್ದೇವೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಜನತೆಗೆ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು.
ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ
ಪಕ್ಷದ ಮೇಲೆ ವಿಶ್ವಾಸವಿಟ್ಟು ಜನ ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ, ಪಕ್ಷದ ಹೈಕಮಾಂಡ್ ನಮ್ಮ ರಾಜ್ಯದ ನಾಯಕರಿಗೆ ತೆಲಂಗಾಣ ಚುನಾವಣೆ ಉಸ್ತುವಾರಿ ನೀಡಿತ್ತು. ಪ್ರಚಾರದ ವೇಳೆ ಕೆಲವು ಗ್ಯಾರಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು. ಅದರಲ್ಲಿ ಮಹಿಳೆಯರಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವುದಾಗಿ ಭರವಸೆಯೂ ಒಂದಾಗಿದೆ. ಮಹಿಳೆಯರು ಬಹು ದೊಡ್ಡ ಬೆಂಬಲ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.