ಕೊಡಗು: ಇಂದು ಕಾಡಾನೆ ದಾಳಿಗೆ ಮೃತಪಟ್ಟ ಕಕ್ಕಬ್ಬೆ ನಾಲಡಿ ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ ಅವರ ಮನೆಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವನ್ಯಜೀವಿಗಳ ದಾಳಿ ತಡೆಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್,ಕಿರಣ್ ಹಾಗೂ ನಾಪೋಕ್ಲು, ಕಕ್ಕಬ್ಬೆ ಭಾಗದ ಬಿಜೆಪಿ ಮುಖಂಡರು ಹಾಜರಿದ್ದರು.