ಬೆಂಗಳೂರು: ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಇದು ಸಾಧ್ಯತೆಯ ಕಲೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಷರತ್ತು ವಿಧಿಸದೇ ಯೋಗೇಶ್ವರ್ ಪಕ್ಷವನ್ನು ಸೇರಿದ್ದಾರೆ ಎಂದು ತಿಳಿಸಿದರು.
ಇಂದು ಬೆಳಗ್ಗೆ 8 ಗಂಟೆಗೆ ಯೋಗೇಶ್ವರ್ ನಮ್ಮ ಮನೆಗೆ ಬಂದು ನನ್ನನ್ನು ಭೇಟಿ ಮಾಡಿದರು. ಸಾಕಷ್ಟು ವಿಚಾರ ಚರ್ಚೆ ಮಾಡಿದರು. ನಾನು ಕಾಂಗ್ರೆಸ್ನಲ್ಲಿ ಇದ್ದವನು ಮುಂದೆ ಕಾಂಗ್ರೆಸ್ ನಲ್ಲಿ ಇರಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದರು. ಈ ವಿಚಾರವನ್ನು ತಕ್ಷಣವೇ ಸಿಎಂ, ಪಕ್ಷದ ವರಿಷ್ಟರ ಗಮನಕ್ಕೆ ತಂದೆ ಎಂದು ಹೇಳಿದರು.
ಪ್ರತಿಬಾರಿ ಲೈಂಗಿಕತೆಯ ನಂತರ ತಲೆನೋವು ಕಾಣಿಸಿಕೊಳ್ಳುತ್ತಿದೆಯೇ..? ಇಲ್ಲಿದೆ ಕಾರಣಗಳು
ಚನ್ನಪಟ್ಟಣ ಉಪಚುನಾವಣೆ ಘೋಷಣೆಯಾದ ಬಳಿಕ ಡಿಕೆ ಶಿವಕುಮಾರ್ ನಾವು ಅಚ್ಚರಿಯ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದಿದ್ದರು.ಕೊನೆ ಹಂತದಲ್ಲಿ ಡಿಕೆ ಸುರೇಶ್ (DK Suresh) ಹೆಸರು ಬಂದಿತ್ತು. ಆದರೆ ಅಧಿಕೃತವಾಗಿ ಯಾವುದೇ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿರಲಿಲ್ಲ.