ರಾಮನಗರ:- ಕೋಟ್ಯಾಂತರ ಬೆಲೆ ಬಾಳುವ ಜಮೀನನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ದಾನ ಮಾಡಿದ್ದೇನೆ ಆದರೆ ಕುಮಾರಸ್ವಾಮಿ ಏನು ಮಾಡಿದ್ದಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದ್ದಾರೆ
KR Pura: ಕೈ ಅಭ್ಯರ್ಥಿ ಪ್ರೋ.ರಾಜೀವ್ ಗೌಡ ಕೆಆರ್ ಪುರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ!
ಈ ಸಂಬಂಧ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಜನಕ್ಕೆ ತಾವು ಮಾಡಿದ ಸಹಾಯಗಳನ್ನು ಪಟ್ಟಿ ಮಾಡಲು ಮುಂದಾದ ಶಿವಕುಮಾರ್, ಮೂರ್ನಾಲ್ಕು ಹಳ್ಳಿಗಳ ಹೆಸರುಗಳನ್ನು ಹೇಳಿ ಕೆಲವು ಕಡೆ ಮೂರು, ಮತ್ತೊಂದು 5 ಎಕರೆ ಜಮೀನುಗಳನ್ನು ಶಾಲಾ ಕಾಲೇಜುಗಳನ್ನು ಕಟ್ಟಲು ದೇಣಿಗೆ ನೀಡಿದ್ದಾಗಿ ಹೇಳಿದರು. ಕೋಟ್ಯಾಂತರ ಬೆಲೆ ಬಾಳುವ ಜಮೀನನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ದಾನ ನೀಡಿದ್ದೇನೆ, ಇಂಥ ಕೆಲಸವೇನಾದರೂ ಕುಮಾರಸ್ವಾಮಿ ಮಾಡಿದ್ದಾರೆಯೇ ಎಂದು ಶಿವಕುಮಾರ್ ಕೇಳಿದರು. ಕಾಂಗ್ರೆಸ್ ಮುಖಂಡರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತೊಂದರೆ ಕೊಡುತ್ತಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಹಣ ಹಂಚುತ್ತಿದ್ದಾರಲ್ಲ? ಅವರ ಮನೆಗಳ ಮೇಲೆ ಐಟಿ ಇಲಾಖೆ ಯಾಕೆ ದಾಳಿ ಮಾಡುತ್ತಿಲ್ಲ ಎಂದು ಶಿವಕುಮಾರ್ ಪ್ರಶ್ನಿಸಿದರು