ಬೆಂಗಳೂರು: ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ಕಾಂಗ್ರೆಸ್ನವರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ ಎಂದು ಡಿಕೆಶಿ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದರು.
Lok Sabha Elections: ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿಯಾದ ಸಂಸದೆ ಶೋಭಾ ಕರಂದ್ಲಾಜೆ: ಕಾರಣವೇನು?
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜನ ತಿರಸ್ಕಾರ ಮಾಡಿದಾಗ ನಮ್ಮ ಮನೆ ಬಾಗಿಲಿಗೆ ಬಂದ್ದಿದ್ದು ನೀವು. ಈಗ ಬನ್ನಿ ಕಾಂಗ್ರೆಸ್ಗೆ ಅಂತ ಡಿ.ಕೆ.ಶಿವಕುಮಾರ್ ಕರೆಯುತ್ತಿದ್ದಾರೆ. ಕಾಂಗ್ರೆಸ್ ಜತೆ ಸರ್ಕಾರ ಮಾಡಿದಾಗ ಪಕ್ಷ ನಾಶಕ್ಕೆ ಹೊರಟಿದ್ದರು. ನಮ್ಮ ಶಾಸಕರಿಗೆ ಬ್ರೈನ್ ವಾಶ್ ಮಾಡಿ ಪಕ್ಷಕ್ಕೆ ಸೇರಿಸಿಕೊಂಡರು. ಹಂತ ಹಂತವಾಗಿ ರಾಜಕೀಯವಾಗಿ ಮುಗಿಸಲು ಪ್ರಯತ್ನ ಮಾಡಿದ್ರಿ. ಯಾವ ರೀತಿ ನಮ್ಮ ಶಕ್ತಿ ಕುಂದಿಸಲು ಯತ್ನಿಸಿದ್ದೀರಿ ಎಂದು ಗೊತ್ತು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ಮಾಡಿದರು.
ನಮ್ಮ ಮೈತ್ರಿ ಬಗ್ಗೆ ಡಿ.ಕೆ.ಶಿವಕುಮಾರ್ ಅಯ್ಯೋ ಪಾಪ ಎಂದಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನೀವು ಮಂಡ್ಯದಲ್ಲಿ ಏನೂ ಮಾಡಿದ್ದಿರಾ ಅಂತ ಗೋತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಜಯದೇವ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ನೀವು ಕಾರಣ. 2018 ರಲ್ಲಿ ನಾನು ಸಿಎಂ ಇದ್ದಾಗ ನೀವು ಹೇಗೆ ನೆಡೆಸಿಕೊಂಡಿದ್ದೀರಿ ಅಂತ ಗೊತ್ತಿದೆ. ನಾನು ಸಿಎಂ ಇದ್ದಾಗ ಒಂದು ದಿನ ನಮ್ಮ ಕೆಲಸದ ಬಗ್ಗೆ ನೀವು ಮಾತನಾಡಿಲ್ಲ. ರೈತರ ಸಾಲದ ಬಗ್ಗೆ ಒಂದು ಮತನಾಡಿಲ್ಲ ಹಾಗೆ ರಾಜಕೀಯವಾಗಿ ನಮಗೆ ವಿಷ ಹಾಕಿದ್ದಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.