ಚಿಕ್ಕಮಗಳೂರು: 80% ಹಿಂದೂಗಳೇ ಇದ್ದರೂ ನೆಮ್ಮದಿಯಿಂದ ಗಣೇಶೋತ್ಸವ ಆಚರಿಸೋಕೆ ಆಗ್ತಿಲ್ಲ. ನಾಗಮಂಗಲ, ದಾವಣಗೆರೆಯಲ್ಲಿ ಕಲ್ಲು ತೂರಾಟ, ಬೆಳಗಾವಿಯಲ್ಲಿ ಚಾಕು ಇರಿತ, ಇಂತಹ ಕೆಟ್ಟ ಪರಿಸ್ಥಿತಿಗೆ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತಂದಿದೆ ಎಂದು ಎಂಎಲ್ಸಿ ಸಿ.ಟಿ ರವಿ ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವಡೆ ಗಣಪತಿ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಮತಾಂದರಿಗೆ ಬೆಂಬಲ ಕೊಟ್ಟು ರಾಜಕಾರಣ ಮಾಡುವುದರಿಂದ ಮತಾಂದರು ಕೊಬ್ಬಿದ್ದಾರೆ. ಸಿದ್ದರಾಮಯ್ಯನವರೇ,
ಬಂಪರ್ ಅವಕಾಶ: ಕ್ರೀಡಾ ಕೋಟಾದಡಿ ಸುಲಭವಾಗಿ ಸರ್ಕಾರಿ ಉದ್ಯೋಗ ಪಡೆಯಬಹುದು!
ನಿಮ್ಮ ಸೆಕ್ಯುಲರ್ ಅಂದ್ರೆ ಇದೇನಾ? ಗಣೇಶೋತ್ಸವದ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ಹಾಕಿಸೋದು ನಿಮ್ಮ ಸೆಕ್ಯುಲರ್ ನೀತಿನಾ? ನಿಮ್ಮ ಸರ್ಕಾರ ಬಂದಾಗ ಏಕೆ ಇವರೆಲ್ಲ ಬಾಲ ಬಿಚ್ಚುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಮತಾಂದರ ಇಂತಹ ಸೊಕ್ಕಿಗೆ ನಿಮ್ಮ ಸರ್ಕಾರವೇ ಕಾರಣ. ಅವರ ಹಡೆಮುರಿ ಕಟ್ಟದಿದ್ರೆ ಕರ್ನಾಟಕ ನಾಡಗೀತೆಗೆ ಆಶಯದಂತೆ ಇರುವುದಿಲ್ಲ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.