ಬೆಂಗಳೂರು: ಸಮರ್ಥ ಭಾರತ ಸಂಸ್ಥೆಯು 10 ವರ್ಷ ಪೂರೈಸಿದ ಸಂದರ್ಭದಲ್ಲಿ ಶಂಕರಪುರದ ಉತ್ತುಂಗದಲ್ಲಿ ‘ಸ್ವಯಂಸೇವಕರ ಸಭೆ’ಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಮರ್ಥ ಭಾರತದ ಮಾರ್ಗದರ್ಶಕ ನಾ.ತಿಪ್ಪೇಸ್ವಾಮಿ ಮಾತನಾಡಿ, ಯುವಜನತೆಗೆ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶನದ ಅಗತ್ಯವಿದೆ. ಸಮಾಜಕ್ಕೆ ಸಮಾಜದ ಸೇವೆಗಾಗಿ ಸಮಯ ನೀಡುವವರ ಅಗತ್ಯವಿದೆ. ಈ ಎರಡೂ ಕಾರ್ಯವನ್ನು ಸಮರ್ಥ ಭಾರತ ಸಂಸ್ಥೆ ಕಳೆದ ಒಂದು ದಶಕದಿಂದ ಮಾಡಿಕೊಂಡು ಬರುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿಯ ಸಂದರ್ಭದಲ್ಲಿ ಹೆಚ್ಚೆಚ್ಚು ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಬೇಕಿದೆ. ಸಮರ್ಥ ಭಾರತ ಸಂಸ್ಥೆಯ ಕಾರ್ಯಚಟುವಟಿಕೆಯ ವೇಗವನ್ನೂ ಹೆಚ್ಚಿಸುವ ಸಮಯ ಬಂದಿದೆ ಎಂದು ಅಭಿಪ್ರಾಯಪಟ್ಟರು.
ಬಳಿಕ ಸಮರ್ಥ ಭಾರತದ ಟ್ರಸ್ಟಿ ರಾಜೇಶ್ ಪದ್ಮಾರ್ ಸಮರ್ಥ ಭಾರತದ 10 ವರ್ಷಗಳ ಕಾರ್ಯಚಟುವಟಿಕೆಗಳ ಕಿರುವರದಿಯನ್ನು ಸಭಿಕರ ಮುಂದಿಟ್ಟರು.
ಬಳಿಕ ಸಮರ್ಥ ಭಾರತದ ಟ್ರಸ್ಟಿ ರಾಜೇಶ್ ಪದ್ಮಾರ್ ಸಮರ್ಥ ಭಾರತದ 10 ವರ್ಷಗಳ ಕಾರ್ಯಚಟುವಟಿಕೆಗಳ ಕಿರುವರದಿಯನ್ನು ಸಭಿಕರ ಮುಂದಿಟ್ಟರು.