ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿ ಅಧಿಕಾರದಲ್ಲಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದರೇ ತಾನೆ ಚರ್ಚೆ ಮಾಡಬೇಕಿರೋದು ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ವಯನಾಡು ಬಳಿ ಭೀಕರ ಭೂಕುಸಿತ: ಕೇರಳ ಸಿಎಂ ಜೊತೆ ಪ್ರಧಾನಿ ಮೋದಿ ಮಾತು: HDK ಅಭಿನಂದನೆ!
ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ? ಮುಡಾ (MUDA) ವಿಚಾರದಲ್ಲಿ ಸಿಎಂ ಪಾತ್ರ ಏನಿದೆ? ತಪ್ಪೇನಿದೆ? ಬದಲಿ ಸೈಟ್ ಕೊಟ್ಟಿರೋದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಈಗಲೂ ಸಿದ್ದರಾಮಯ್ಯಗೆ ಕಪ್ಪು ಚುಕ್ಕಿ ಇಲ್ಲ. ಏನಿದೆ ಕಪ್ಪು ಚುಕ್ಕೆ? ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡ್ತಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿಯವರ ಬಳಿ ಯಾವುದೇ ವಿಚಾರ ಇಲ್ಲ. ಅದಕ್ಕೆ ಇದನ್ನೇ ದೊಡ್ಡ ಸುದ್ದಿ ಮಾಡ್ತಿದ್ದಾರೆ. ಕುಮಾರಸ್ವಾಮಿಯವರು ಅವರ ಬ್ಯಾಕಪ್ಗೆ ನಿಂತಿದ್ದಾರೆ. ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದನ್ನ ಸಹಿಸೋದಕ್ಕೆ ಆಗ್ತಿಲ್ಲ. ಅದಕ್ಕಾಗಿ ಅವರನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.