ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ (Zameer Ahmed Khan) ಅವರು ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. ಅಂತೆಯೇ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು (Chest Pain) ಕಾಣಿಸಿಕೊಂಡಿದೆ.
ಬೇಸಿಗೆಯಲ್ಲಿ ಹಾಸಿಗೆ, ದಿಂಬಿನ ಶಾಖ ನಿಯಂತ್ರಿಸುವುದು ಹೇಗೆ ಗೊತ್ತಾ!?
ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಹೃದಯ ತಜ್ಞರಾದ ಡಾ.ಕಾರ್ತಿಕ್, ಡಾ.ಸುಜಯ್ ರಿಂದ ತಪಾಸಣೆ ನಡೆಸಲಾಯಿತು. ಬಳಿಕ ತುರ್ತುಚಿಕಿತ್ಸಾ ಘಟಕದಲ್ಲಿ ತಪಾಸಣೆ ಮುಂದುವರಿದಿದೆ. ಇಸಿಜಿ ನಾರ್ಮಲ್ ಇರುವ ಮಾಹಿತಿ ಲಭ್ಯವಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)